Virat Kohli : ವೃತ್ತಿ ಬದುಕಿನಲ್ಲಿ ಕಠಿಣ ನಿರ್ಧಾರ ತೆಗೆದುಕೊಂಡ ವಿರಾಟ್​ ಕೊಹ್ಲಿ, ಅಭಿಮಾನಿಗಳಿಗೆ ನಿರಾಸೆ

 ಭಾರತವು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ 3ಟಿ 20, 3 ಏಕದಿನ ಮತ್ತು 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಕೊಹ್ಲಿ (Virat Kohli) ಸೀಮಿತ ಓವರ್​ಗಳ ಸರಣಿಯಲ್ಲಿ ಆಡುವುದಿಲ್ಲ ಎಂದು ವರದಿಗಳು ತಿಳಿಸಿವೆ.



ಬೆಂಗಳೂರು: 2023 ರ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಭಾರತ ತಂಡ ಸೋತ ಬಳಿಕ ತಂಡದ ಪ್ರಮುಖ ಆಟಗಾರರಾದ ವಿರಾಟ್​ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭಾರೀ ನಿರಾಸೆ ಹೊಂದಿದ್ದಾರೆ. ಭಾರವಾದ ಹೃದಯವನ್ನು ಹೊತ್ತುಕೊಂಡು ಅವರು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಏತನ್ಮಧ್ಯೆ ಅವರಿಬ್ಬರ ಕ್ರಿಕೆಟ್​ ವೃತ್ತಿ ಜೀವನದ ಭವಿಷ್ಯದ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ವಿರಾಟ್​ ಕೊಹ್ಲಿ ಸೀಮಿತ ಓವರ್​ಗಳ ಕ್ರಿಕೆಟ್​ನಿಂದ ದೂರ ಇರಬಹುದು ಎಂಬ ಮಾತುಗಳೇ ಕೇಳಿಬರುತ್ತಿತ್ತು. ಅದಕ್ಕೆ ಪೂರಕವಾಗಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಒಡಿಐ ಮತ್ತು ಟಿ20 ಕ್ರಿಕೆಟ್​ನಲ್ಲಿ ಆಡುವುದಿಲ್ಲ ಎಂದು ವರದಿಗಳು ಹೇಳಿವೆ.

ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ವಿರಾಟ್ ಕೊಹ್ಲಿ ವೈಟ್ ಬಾಲ್ ಕ್ರಿಕೆಟ್​ನಿಂದ ಹೊರಗುಳಿಯಲಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಪ್ರವಾಸವು ಡಿಸೆಂಬರ್ 10ರಿಂದ ಪ್ರಾರಂಭವಾಗಲಿದ್ದು, ಮೂರು ಪಂದ್ಯಗಳ ಟಿ 20 ಐ ಸರಣಿಯೊಂದಿಗೆ ಶುರುವಾಗಲಿದೆ. ನಂತರ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜನೆಗೊಂಡಿದೆ. ಪ್ರವಾಸವು ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಕೊನೆಗೊಳ್ಳುತ್ತದೆ, ಇದು ಡಬ್ಲ್ಯುಟಿಸಿ ಋತುವಿನ ಭಾಗವೂ ಆಗಿದೆ. ಈ ಎರಡು ಪಂದ್ಯಗಳಲ್ಲಿ ಕೊಹ್ಲಿ ಆಡಬಹುದು ಎಂದು ವರದಿ ಹೇಳಿದೆ.

ವೈಟ್-ಬಾಲ್ ಕ್ರಿಕೆಟ್​ನಲ್ಲಿ ವಿರಾಮದ ಅಗತ್ಯವಿದೆ. ಅದೇ ರೀತಿ ವೈಟ್-ಬಾಲ್ ಕ್ರಿಕೆಟ್​ನಲ್ಲಿ ತಮ್ಮ ಭವಿಷ್ಯದ ಬಗ್ಗೆಯೂ ಕೊಹ್ಲಿ ಬಿಸಿಸಿಐ ಮತ್ತು ಆಯ್ಕೆದಾರರಿಗೆ ಮಾಹಿತಿ ನೀಡಿದ್ದಾರೆ” ಎಂದು ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

2023ರ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಅಭಿಯಾನವನ್ನು ನಡೆಸಿದ್ದರು. ಅಲ್ಲಿ ತಮ್ಮ 50 ನೇ ಏಕದಿನ ಶತಕವನ್ನು ಗಳಿಸಿ ಸಚಿನ್ ದಾಖಲೆ ಮುರಿದಿದ್ದರು. ವಿಶ್ವಕಪ್ ಅಭಿಯಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್​ ಸೇರಿದಂತೆ ವಿವಿಧ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದರು. ಕೊಹ್ಲಿ ಈ ಆವೃತ್ತಿಯಲ್ಲಿ 765 ರನ್ ಸಿಡಿಸಿದ್ದಾರೆ. ಆದಾಗ್ಯೂ ವಿಶ್ವ ಕಪ್​ ಪ್ರಶಸ್ತಿಗೆ ಪಾತ್ರವಾಗದೇ ಇರುವುದು ಅವರ ಪಾಲಿಗೆ ವೃತ್ತಿ ಜೀವನದ ದೊಡ್ಡ ಬೇಸರದ ಸಂಗತಿಯಾಗಿದೆ.

ಟ್ರೋಫಿಯನ್ನು ಕಳೆದುಕೊಂಡರೂ, ಕೊಹ್ಲಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟಗಾರ ಎನಿಸಿಕೊಂಡಿದ್ದರು. ಭಾರತ ತಂಡಕ್ಕೆ ನಿರ್ಣಾಯಕ ಹಂತಗಳಲ್ಲಿ ದೊಡ್ಡ ರನ್​ಗಳನ್ನು ತಂದುಕೊಟ್ಟಿದ್ದರು. ಡಬ್ಲ್ಯುಟಿಸಿ ಚಾಂಪಿಯನ್​ಶಿಪ್​ ಸೇರಿದಂತೆ ಪಂದ್ಯಾವಳಿಯಲ್ಲಿ ಭಾರತವು ದೊಡ್ಡ ರನ್​ಗಳನ್ನು ಗಳಿಸಿದಾಗಲೆಲ್ಲಾ ಕೊಹ್ಲಿ ಸುದೀರ್ಘ ಇನಿಂಗ್ಸ್​ ಆಡಿದ್ದರು. ಎಲ್ಲ ಕಡೆಯೂ ಭಾರತ ಟ್ರೋಫಿ ಎತ್ತಿಲ್ಲ. ಆದರೆ, ಕೊಹ್ಲಿಯ ಅಬ್ಬರ ಎಲ್ಲೂ ಕಡಿಮೆ ಇರಲಿಲ್ಲ.

ಭಾರತ ತಂಡ ಸದ್ಯ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡುತ್ತಿದೆ. 2-1 ಅಂತರದ ಮುನ್ನಡೆ ಸಾಧಿಸಿರುವ ಭಾರತ ತಂಡ ಶುಕ್ರವಾರ ನಡೆಯಲಿರುವ ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್ಪುರಕ್ಕೆ ಪ್ರಯಾಣ ಬೆಳೆಸಲಿದೆ.

ಸಂಪೂರ್ಣ ಸುದ್ದಿಗಾಗಿ/ಮಾಹಿತಿಗಾಗಿ, ಈ ಲಿಂಕ್ ಅನ್ನು ಕ್ಲಿಕ್ ಮಾಡಿ 👉 Kannada News

ಇಂತಹ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👉 Kannada sports news


Comments

Popular posts from this blog

ICC World Cup 2023 : ಭಾರತಕ್ಕೆ ಲವ್ ಬ್ರೇಕ್ ಅಪ್; ವಿಶ್ವ ಕಪ್​ ಸೋಲಿಗೆ ಆರ್​ಸಿಬಿ ನಾಯಕನ ವಿಶ್ಲೇಷಣೆ

Australia tour of India, 2023 ಬೆಂಗಳೂರಿನಲ್ಲಿ ನಡೆಯುವ ಭಾರತ-ಆಸೀಸ್​ ಟಿ20 ಪಂದ್ಯದ ಟಿಕೆಟ್‌ ಸೇಲ್ ದಿನಾಂಕ ಪ್ರಕಟ

ICC World Cup 2023 : ರೋಹಿತ್ ಬಳಗವನ್ನು ಲೇವಡಿ ಮಾಡಿ ವಿವಾದ ಸೃಷ್ಟಿಸಿದ ಆಸೀಸ್​ ನಾಯಕ